ಮಂಗಳೂರಿನ ಆರ್ಟಿಒ ಕಚೇರಿ ಭವನಕ್ಕೆ ಬಾಂಬ್ ಬೆದರಿಕೆ!



(ನ್ಯೂಸ್ ಕಡಬ) newskadaba.com,  ಡಿ.15: ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಮೇಲ್‌ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.





ಮಂಗಳೂರಿನ ನೆಹರು ಮೈದಾನದಲ್ಲಿರುವ ಆರ್‌ಟಿಒ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್ ಬಂದಿದೆ. ಇನ್ನು 5 ಬಾಂಬ್‌ಗಳಿಂದ ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸಂದೇಶ ಬಂದಿದ್ದು, ಸಿಬ್ಬಂದಿ ಕಂಗಾಲಾಗಿದ್ದಾರೆ. ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಡಿಸಿ ಕಚೇರಿ ಇಮೇಲ್-ಗೆ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.






error: Content is protected !!
Scroll to Top