(ನ್ಯೂಸ್ ಕಡಬ) newskadaba.com,ಡಿ.22 : ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ಕುಶಿತ್ ಮಲ್ಲಾರ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈತನು ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಸುಬ್ರಮಣ್ಯ ಇಲ್ಲಿ ಯ ಏಳನೇ ತರಗತಿ ವಿದ್ಯಾರ್ಥಿ. ಈತ ಲಿಂಗಪ್ಪಗೌಡ ಮಲ್ಲಾರ ಮತ್ತು ಭವ್ಯ ದಂಪತಿಗಳ ಪುತ್ರ. ಚಿತ್ರಕಲಾ ಶಿಕ್ಷಕರಾದ ಸತೀಶ್ ಪಂಜ ಇವರು ತರಬೇತಿಯನ್ನು ನೀಡಿರುತ್ತಾರೆ.








