‘ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಬಿಜೆಪಿ ದಾಳಿ’- ರಾಹುಲ್‌ ಆರೋಪ



(ನ್ಯೂಸ್‌ ಕಡಬ) newskadaba.com,ಡಿ.24: ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.





ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐಗಳನ್ನುಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.






ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದಿದ್ದಾರೆ.

ಇಂಡಿಯಾ ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.

error: Content is protected !!
Scroll to Top