ಮಾಜಿ ಪ್ರಧಾನಿ ವಾಜಪೇಯಿ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ



(ನ್ಯೂಸ್‌ ಕಡಬ)com,ಡಿ.25 ದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್‌ ಅಟಲ್‌‍ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.





ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ ಪಿ ನಡ್ಡಾ, ನಿರ್ಮಲಾ ಸೀತಾರಾಮನ್‌‍, ಎನ್‌ಡಿಎ ಮಿತ್ರಪಕ್ಷ ಜೆಡಿ-ಯು ನಾಯಕ ಮತ್ತು ಕೇಂದ್ರ ಸಚಿವ ರಾಜೀವ್‌ ರಂಜನ್‌ ಸಿಂಗ್‌‍, ಇತರ ಹಲವಾರು ಸಚಿವರು, ಸಂಸದರು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






error: Content is protected !!
Scroll to Top