ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ



(ನ್ಯೂಸ್‌ ಕಡಬ) newskadaba.com,ಫೆ.05 : ಮಂಗಳೂರಿನ ಪಚ್ಚನಾಡಿ ಪರಿಸರದ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನ ಮೃತದೇಹವೊಂದು ಇಂದು ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.





ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ​ ಇದು ಚಲಿಸುವ ರೈಲಿನಿಂದ ಬಿದ್ದು ಸಂಭವಿಸಿದ ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..






ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸರು ಹಾಗೂ ಸ್ಥಳೀಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

error: Content is protected !!
Scroll to Top