ಶಾಸಕಿ ಭಾಗೀರಥಿ ಮುರುಳ್ಯರವರಿಂದ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ದಿಢೀರ್ ಆಗಮನ



(ನ್ಯೂಸ್‌ ಕಡಬ) newskadaba.com,  ಮಾ.04 : ನೆಟ್ಟಣ ರೈಲು ನಿಲ್ದಾಣದ ಬಗ್ಗೆ ಹಲವಾರು ವಿಚಾರದಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರವರು ರೈಲ್ವೆ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಸ್ಟೇಷನ್ ಮಾಸ್ಟರ್ ಮತ್ತು ಸಿಬಂದಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಶೀಘ್ರವಾಗಿ ಮಾಡುವಂತೆ ಸೂಚಿಸಿದರು.





ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಕೃಷ್ಣ ಶೆಟ್ಟಿ ಕಡಬ,ಸಿ.ಎ.ಬ್ಯಾಂಕ್ ಬಿಳಿನೆಲೆ ಇದರ ಅಧ್ಯಕ್ಷ ವಾಡ್ಯಪ್ಪ ಗೌಡ, ಕೊಂಬಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಧುಸೂದನ್, ಪ್ರಮುಖರಾದ ಕಿಶೋರ್ ಶಿರಾಡಿ, ಪ್ರಸಾದ್ ನೆಟ್ಟಣ,ದೀಕ್ಷಿತ್ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.






error: Content is protected !!
Scroll to Top