(ನ್ಯೂಸ್ ಕಡಬ) newskadaba.com ಮಾ. 17. ಸಾರ್ವಜನಿಕ ಸ್ಥಳದಲ್ಲಿ ವಿವಿಧೆಡೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿಯಲ್ಲಿ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.
ಬಂಧಿತ ಆರೋಪಿಗಳನ್ನು ಕಿರಣ ಪ್ರಸಾದ್ (22), ಸಲ್ಮಾನ್ (18), ಪ್ರಜ್ವಲ್ (23), ಕಾರ್ತಿಕ್ (24), ಪ್ರಜ್ವಲ್ ಅಶ್ವತ್ಥ್ ವೇಗಸ್ (25) ಮತ್ತು ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ (24) ಎಂದು ಗುರುತಿಸಲಾಗಿದೆ.








