ಬೆಳ್ತಂಗಡಿ: ಮತದಾನಕ್ಕೆಂದು ತೆರಳಿದ್ದ ವ್ಯಕ್ತಿಗೆ ಹೃದಯಾಘಾತ ​► ಶಾಲೆಯ ಆವರಣದಲ್ಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.12. ಮತದಾನಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಅಂಡಿಜೆ ಎಂಬಲ್ಲಿ ಶನಿವಾರದಂದು ನಡೆದಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ ಎಂದು ಗುರುತಿಸಲಾಗಿದೆ. ಇವರು ಮತದಾನ ಮಾಡಲೆಂದು ಅಂಡಿಂಜೆ ಸರಕಾರಿ ಶಾಲೆಗೆ ತೆರಳಿದ್ದು, ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದರು. ವೇಣೂರು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನೆಟ್ಟಣ: ದೇವಸ್ಥಾನಕ್ಕೆಂದು ಆಗಮಿಸಿ ಹಿಂತಿರುಗಿ ಹೋಗಲು ಹಣವಿಲ್ಲದೆ ಕಂಗಾಲಾದ ಪ್ರೇಮಿಗಳು ► ಅತ್ತಿತ್ತ ಅಲೆದಾಡುತ್ತಿದ್ದ ಪ್ರೇಮಿಗಳನ್ನು ಹಿಡಿದು ಕಡಬ ಠಾಣೆಗೆ ಒಪ್ಪಿಸಿದ ಊರವರು

error: Content is protected !!
Scroll to Top