ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  .21:   ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ

ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೀಟ್‌ವೇವ್ ಎಚ್ಚರಿಕೆ ಘೋಷಿಸಲಾಗಿದೆ..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top