ಕಾಪು: ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.20: ಸ್ಕೂಟರ್ ವಾಹನವು ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕಾಪು ಪಣಿಯೂರ್‌ನಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಪಣಿಯೂರು ಕೇಂದ್ರದ ನಿವಾಸಿ ಕೃಷ್ಣ ಮೂಲ್ಯ (22) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಯುವಕ ಹಾಲು ಖರೀದಿಸಲು ಹೋಗಿ ತನ್ನ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವನ ಮುಂದೆ ಚಲಿಸುತ್ತಿದ್ದ ನೀರಿನ ಟ್ಯಾಂಕರ್ ಕಂಚುಗರ ರಸ್ತೆಗೆ ಪ್ರವೇಶಿಸಲು ಬಲಕ್ಕೆ ತಿರುಗಿದಾಗ ಸ್ಕೂಟರ್ ಅದಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಡಿಕ್ಕಿಯ ಪರಿಣಾಮ ತೀವ್ರವಾಗಿದ್ದರಿಂದ, ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದವು. ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿತು. ಸ್ಥಳೀಯ ನಿವಾಸಿಗಳು ಜಲಾಲುದ್ದೀನ್ ನೇತೃತ್ವದಲ್ಲಿ ಎಸ್‌ಡಿಪಿಐ ಆಂಬ್ಯುಲೆನ್ಸ್ ಮೂಲಕ ಅವರನ್ನು ಉಚ್ಚಿಲಕ್ಕೆ ಕರೆದೊಯ್ದು ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅವರು ಈಗಾಗಲೇ ಸಾವನ್ನಪ್ಪಿದ್ದಾರೆ .ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ

Scroll to Top