ವಿಟ್ಲ: ಬೈಕ್‌ – ಜೀಪ್ ಢಿಕ್ಕಿ ► ಬಸ್ಸಿನಡಿಗೆ ಬಿದ್ದ ಸಹ ಸವಾರ ಸ್ಥಳದಲ್ಲೇ‌ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.20. ಬೈಕ್ ಸವಾರನೊಬ್ಬ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ – ಮಂಗಳೂರು ರಸ್ತೆಯ ಒಕ್ಕೆತ್ತೂರು ಎಂಬಲ್ಲಿ ಭಾನುವಾರದಂದು ನಡೆದಿದೆ.

ಮೃತ ಸವಾರನನ್ನು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ನಿವಾಸಿ ಕುಂಞಮೋನು ಎಂಬವರ ಪುತ್ರ ಮಹಮ್ಮದ್ ಅಫ್ರಿದ್(17) ಎಂದು ಗುರುತಿಸಲಾಗಿದೆ. ವಿಟ್ಲದ ಚಿನ್ನಾಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಈತ ಭಾನುವಾರದಂದು ತನ್ನ ಸ್ನೇಹಿತನೊಂದಿಗೆ ಹಿಂಬದಿ ಸವಾರನಾಗಿ ಬೈಕಿನಲ್ಲಿ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಒಕ್ಕೆತ್ತೂರು ಸೇತುವೆ ಬಳಿಯ ಅಪಾಯಕಾರಿ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಜೀಪಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಫ್ರಿದ್ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಅದೇ ಸಂದರ್ಭದಲ್ಲಿ ವಿಟ್ಲ ಕಡೆಯಿಂದ ಬಂದ ಖಾಸಗಿ ಬಸ್ಸು ಆತನ ತಲೆಯ ಮೇಲೆ ಹರಿದು ಅಫ್ರಿದ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top