ವಿಟ್ಲ: ವಿಜಯೋತ್ಸವದ ನಂತರ‌ ಉಂಟಾದ ಗಲಭೆಯ ಹಿನ್ನೆಲೆ ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20. ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಉಂಟಾದ ಘರ್ಷಣೆಗೆ ಕಾರಣವಾದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ತಮೀಮ್(28), ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ರಹಿಮಾನ್(35), ಅಬ್ದುಲ್ ಅಝೀಝ್ ಎಂಬವರ ಪುತ್ರ ಮಹಮ್ಮದ್ ಝಕರಿಯಾ(25) ಹಾಗೂ ಇಬ್ರಾಹಿಂ ಒಕ್ಕೆತ್ತೂರು ಎಂಬವರ ಪುತ್ರ ಸುಲೈಮಾನ್(38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Scroll to Top