(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.
ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.









