(ನ್ಯೂಸ್ ಕಡಬ) newskadaba.com, ಜೂ.09 ಮಂಗಳೂರು:ಆರೋಗ್ಯ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಖಾಸಗಿ ಆಸ್ಪತ್ರೆಗಳ ಮನಸೋಇಚ್ಛೆ ವಸೂಲಾತಿಗೆ ಬ್ರೇಕ್ ಹಾಕಲು ಕಠಿಣ ಆದೇಶ ನೀಡಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ಹಣ ವಸೂಲಿ ಮಾಡುವ ಅಥವಾ ಉಚಿತ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಲಾಗುವುದು.
ರೋಗಿಗಳಿಗೆ ನೆರವಾಗದ ಅಥವಾ ಕರ್ತವ್ಯ ಲೋಪ ಎಸಗುವ ‘ಆರೋಗ್ಯ ಮಿತ್ರ’ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.ಹಳ್ಳಿ ಮತ್ತು ಗುಡ್ಡಗಾಡು ಪ್ರದೇಶಗಳ ಸರ್ಕಾರಿ ವೈದ್ಯರ ವೇತನ ಹೆಚ್ಚಿಸಲು ಹಾಗೂ 3 ವರ್ಷ ಸೇವೆ ಮುಗಿಸಿದ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ಇಲಾಖೆ ತೀರ್ಮಾನಿಸಿದೆ.









