ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com, ಜೂ.11  ಸುಳ್ಯ: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ನಗರದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ಜಿಲ್ಲೆಗೆ ಹಾಗೂ ಸುಳ್ಯ ತಾಲ್ಲೂಕಿಗೆ ಹೆಮ್ಮೆ ತಂದಿದ್ದ ಭವಿಷ್ಯದ ಭರವಸೆಯ ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಸ್ನೇಹಿತರು ತೀವ್ರ ಸಂತಾಪ ಸೂಚಿಸಿದ್ದಾರೆ.

Scroll to Top