(ನ್ಯೂಸ್ ಕಡಬ) newskadaba.com, ಜೂ.13 ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ತಿರುವನಂತಪುರಂ ಪೊಲೀಸ್ ಕಂಟ್ರೋಲ್ ರೂಮ್ಗೆ ಎರಡು ಬಾರಿ ಕರೆ ಮಾಡಿದ್ದ ಆರೋಪಿ, ಕೊಲೆ ಬೆದರಿಕೆ ಒಡ್ಡಿ ಪೊಲೀಸರೊಂದಿಗೂ ಅಸಭ್ಯವಾಗಿ ವರ್ತಿಸಿದ್ದ. “ನನಗೆ ಸತೀಶನ್ ಇಷ್ಟವಿಲ್ಲ” ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರುವುದಾಗಿ ಎಫ್ಐಆರ್ನಲ್ಲಿ ದಾಖಲಾಗಿದೆ.
ಮೊಬೈಲ್ ಸಿಗ್ನಲ್ ಟ್ರ್ಯಾಕ್ ಮಾಡಿದ ಪೊಲೀಸರು ಶನಿವಾರ ಬೆಳಗ್ಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕರೆ ಮಾಡಿದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ಮುಂದಾಗಿದ್ದಾರೆ.













