(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸ್ವಚ್ಚತಾ ಶನಿವಾರ ನಡೆಯಿತು. ತಾಲೂಕು, ಗ್ರಾಮ ಪಂಚಾಯತ್ ಗಳಲ್ಲಿ ರಸ್ತೆ ಬದಿಯ ತ್ಯಾಜ್ಯ ತೆರವು ಚುರುಕು ಪಡೆದಿದ್ದು ಖುದ್ದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳೇ ರಸ್ತೆ ಬದಿಯ ತ್ಯಾಜ್ಯ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡರು.
ರಸ್ತೆ ಇಕ್ಕೆಲಗಳ ಕಸ ತೆರವು, ಹುಲ್ಲುಕಟಾವು, ಜಲಮೂಲಗಳಿಂದ ಪ್ಲಾಸ್ಟಿಕ್ ಬಾಟಲ್ಗಳ ತೆರವು, ಸ್ವಚ್ಛತಾ ಪ್ರತಿಜ್ಞೆ, ಸ್ವಚ್ಛತಾ ಶ್ರಮದಾನ ನಡೆಯಿತು.
ಕೆಲವು ಪಂಚಾಯತ್’ಗಳಲ್ಲಿ ತ್ಯಾಜ್ಯ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಿದ ಪ್ರಕರಣವೂ ನಡೆಯಿತು. ಈವರೆಗೆ 190 ಅಧಿಕ ಪ್ರಕರಣಗಳು ವರದಿಯಾಗಿದ್ದು, ರೂ. 2.90 ಲಕ್ಷ ದಂಡ ವಿಧಿಸಲಾಗಿದೆ. ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ, ಮುಲ್ಕಿ, ಬೆಳ್ತಂಗಡಿ, ಕಡಬ, ಉಳ್ಳಾಲ ಮತ್ತು ಸುಳ್ಯ ತಾಲೂಕುಗಳಲ್ಲಿ ಯಶಸ್ವಿಯಾಗಿ ಸ್ವಚ್ಛ ಶನಿವಾರ ಕಾರ್ಯಕ್ರಮಗಳು ನಡೆಯಿತು.









