(ನ್ಯೂಸ್ ಕಡಬ) newskadaba.com, ಜು.09 ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲುನಲ್ಲಿ ಲಾರಿ ಹಾಗೂ ಕ್ರೂಸರ್ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ತೀವ್ರತೆಗೆ ಆರು ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಮೃತರನ್ನು ಧಾರವಾಡ ಮೂಲದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ ಮತ್ತು ಅಕ್ಷಯ್ ಮಲ್ಲಣ್ಣನವರ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ಗುರುತು ಇನ್ನು ಪತ್ತೆಯಾಗಬೇಕಿದೆ.
ಕ್ರೂಸರ್ ವಾಹನವು ಧಾರವಾಡದಿಂದ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದಾಗ, ಯಲ್ಲಾಪುರದಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ಮೃತದೇಹಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.













