40 ದಿನಗಳಲ್ಲಿ 70 ಬಾರಿ ಕಳ್ಳತನ! ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಟ್ರಸ್ಟ್ ನೌಕರರು ಸೇರಿ 8 ಮಂದಿ ಬಂಧನ



(ನ್ಯೂಸ್‌ ಕಡಬ) newskadaba.com,  ಜು.13 : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ,ಭವಿಷ್ಯದಲ್ಲಿ ಇಂತಹ ಲೋಪಗಳನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಳವಡಿಸಲು ಶಿಫಾರಸು ಮಾಡುವ ಸಾಧ್ಯತೆಯಿದೆ..







ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೇವಲ 40 ದಿನಗಳ ಅವಧಿಯಲ್ಲಿ 70 ಬಾರಿ ದೇಣಿಗೆ ಹಣವನ್ನು ದೋಚಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಾಗಿ ಸಂಜೆ ಪಾಳಿಯಲ್ಲೇ ಈ ಸಂಚು ನಡೆದಿತ್ತು.






ನಗದು ಎಣಿಕೆ ಸಮಯದಲ್ಲಿ ಜೇಬಿಲ್ಲದ ಸಮವಸ್ತ್ರ ಧರಿಸುವುದು, ಕಡ್ಡಾಯ ತಪಾಸಣೆ ಸೇರಿದಂತೆ ಮೂಲಭೂತ ಭದ್ರತಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ …ಪ್ರಸ್ತುತ ದೇಣಿಗೆ ಹಣವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಜಮಾ ಮಾಡಲಾಗುತ್ತಿದ್ದು, ಈ ಲೋಪಗಳ ಹಿನ್ನೆಲೆಯಲ್ಲಿ ಟ್ರಸ್ಟ್ ಈಗ ಬೇರೆ ಖಾಸಗಿ ಬ್ಯಾಂಕ್‌ಗೆ ಸ್ಥಳಾಂತರಗೊಳ್ಳಲು ಅಥವಾ ಬಹು ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಪರ್ಯಾಯಗಳನ್ನು ಹುಡುಕುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಟ್ರಸ್ಟ್ ಉದ್ಯೋಗಿಗಳು ಸೇರಿದಂತೆ ಒಟ್ಟು 8 ಜನರನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು ₹80 ಲಕ್ಷ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಸ್ತಾವಿತ ಎಐ ತಂತ್ರಜ್ಞಾನವು ದೇಣಿಗೆ ಎಣಿಕೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲಿದ್ದು, ಪ್ರತಿ ರೂಪಾಯಿಯನ್ನೂ ನಿಖರವಾಗಿ ಟ್ರ್ಯಾಕ್ ಮಾಡಲು ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top