ಕೃತಕ ಪನ್ನೀರ್ ಸೇರಿ ಹಾನಿಕಾರಕ ಆಹಾರ ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ನಿಷೇಧ: ಯು.ಟಿ. ಖಾದರ್



(ನ್ಯೂಸ್‌ ಕಡಬ) newskadaba.com,  ಆ.24 ಬೆಂಗಳೂರು: ರಾಜ್ಯದಲ್ಲಿ ಕೃತಕ ಪನ್ನೀರ್ (ಅನಲಾಗ್ ಪನ್ನೀರ್) ನಿಷೇಧಿಸಿರುವುದಷ್ಟೇ ಅಲ್ಲದೆ, ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಎಲ್ಲಾ ಕೃತಕ ಆಹಾರ ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.







ಸದ್ಯ ಆಹಾರ ಸುರಕ್ಷತಾ ಆಯುಕ್ತರಿಗೆ ನಿಯಮದಂತೆ ಯಾವುದೇ ಉತ್ಪನ್ನವನ್ನು ಒಂದು ವರ್ಷದ ಅವಧಿಗೆ ಮಾತ್ರ ನಿಷೇಧಿಸುವ ಅಧಿಕಾರವಿದೆ.ಪ್ರತಿ ವರ್ಷ ಆದೇಶ ಹೊರಡಿಸುವ ಬದಲು ಬಲವಾದ ಮತ್ತು ಶಾಶ್ವತ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.






ಬಾಳೆಹಣ್ಣು, ಸಪೋಟ ಮತ್ತು ಮಾವಿನ ಹಣ್ಣುಗಳನ್ನು ಕೃತಕ ರಾಸಾಯನಿಕ ಬಳಸಿ ಮಾಗಿಸುವುದಕ್ಕೆ ಕಡಿವಾಣ ಹಾಕಲಾಗುವುದು.ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರುಕಟ್ಟೆಯಲ್ಲಿ ಕೃತಕ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಮಾರಾಟ ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ.

error: Content is protected !!
Scroll to Top