ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆ



(ನ್ಯೂಸ್ ಕಡಬ) newskadaba.com ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮತ್ತು ವಿ. ಒನ್. ಅಕ್ವಾ ಸೆಂಟರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ-2026 ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ  ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ  ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.







error: Content is protected !!
Scroll to Top