(ನ್ಯೂಸ್ ಕಡಬ) newskadaba.com, ಸೆ.01: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 7 ರಂದು ಆಶ್ಲೇಷಬಲಿ, ಸರ್ಪಸಂಸ್ಕಾರ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕದಂತಹ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ವಿಶೇಷ ಸೇವೆಗಳು ಲಭ್ಯವಿಲ್ಲದಿದ್ದರೂ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀದೇವರ ದರ್ಶನ ಪಡೆಯಲು ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯಾವುದೇ ಅಡಚಣೆ ಇರುವುದಿಲ್ಲ.ಮಹಾಪೂಜೆ, ಶೇಷಸೇವೆ, ಅಭಿಷೇಕ ಮತ್ತು ಅರ್ಚನೆ ಸೇರಿದಂತೆ ನಿತ್ಯದ ಎಲ್ಲಾ ಪೂಜಾ ವಿಧಿವಿಧಾನಗಳು ತಡೆರಹಿತವಾಗಿ ನಡೆಯಲಿವೆ.
ಧಾರ್ಮಿಕ ಸೇವೆಗಳನ್ನು ನೆರವೇರಿಸಲು ಯೋಜಿಸುತ್ತಿರುವ ಭಕ್ತಾದಿಗಳು ಈ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಹಾಗೂ ಮುಂಗಡ ಕಾಯ್ದಿರಿಸುವಿಕೆ (ಬುಕಿಂಗ್) ಯೋಜಿಸಿಕೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.








