ಮಂಗಳೂರಿನ NITK ಸುರತ್ಕಲ್ ಸಂಸ್ಥೆಯ ಇಬ್ಬರು ಅಧ್ಯಾಪಕರು ಸಂಸ್ಥೆಯ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ನಡೆಸಿದ ಆಂತರಿಕ ವಿಚಾರಣೆಯಲ್ಲಿ ಹಣಕಾಸಿನ ಅಕ್ರಮ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೇಳಿಕೆಯಂತೆ, ಸಾರ್ವಜನಿಕ ಸೇವಕರ ನಂಬಿಕೆದ್ರೋಹ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರೂ ಬೋಧಕರನ್ನು ವಶಕ್ಕೆ ಪಡೆಯಲಾಗಿದೆ.
ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್. (48)ಎಂಬುವವರು 2009ರಲ್ಲಿ ಶ್ರೀರಾಮ್ ಫೈನಾನ್ಸ್ನಿಂದ ವಾಹನ ಖರೀದಿಗೆ ₹10 ಲಕ್ಷ ಸಾಲ ಪಡೆದು ಮರುಪಾವತಿಸದೆ, ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.ಮಂಗಳೂರು ಉತ್ತರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.








