ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.08. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಪವಾಡ ಸದೃಶ ಪಾರಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮಂಗಳೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮಾಣಿಯಲ್ಲಿ ಅಪಘಾತವಾಗಿದ್ದು, ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದೆ. ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

Also Read  ಉಡುಪಿ : ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

error: Content is protected !!
Scroll to Top