ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರೆಗುರುಳಿದ ಮರ ► ನಾಲ್ವರಿಗೆ ಗಾಯ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com
ಮಂಗಳೂರು, ಜೂ.09. ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂಗಳಾದೇವಿ ದೇವಸ್ಥಾನದ ಮುಂಭಾಗದ ಮರದ ರೆಂಬೆಯೊಂದು ಮುರಿದು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಗಾಯಾಳುಗಳನ್ನು ಜೆಪ್ಪು ನಿವಾಸಿ ನವೀನ್(45), ಮಾರ್ನಮಿಕಟ್ಟೆ ನಿವಾಸಿಗಳಾದ ಸುರೇಖಾ ಶೆಟ್ಟಿ(53) ಹಾಗೂ ತೇಜಸ್ವಿನಿ(20), ನಂದಿಗುಡ್ಡೆ ನಿವಾಸಿ ಪ್ರಮೀಳಾ(49), ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಶುಕ್ರವಾರ ಸಂಜೆ ಬೀಸಿದ ಭಾರೀ ಗಾಳಿಗೆ ದೇವಸ್ಥಾನದ ಎದುರಿನ ಅಶೋಕ ಮರದ ರೆಂಬೆಯೊಂದು ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ದ್ವಿಚಕ್ರ ವಾಹನವೊಂದು ಹಾನಿಗೀಡಾಗಿದೆ ಎಂದು ತಿಳಿದುಬಂದಿದೆ.

Also Read  ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ

error: Content is protected !!
Scroll to Top