ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂನ್.11. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಭಾನುವಾರದಂದು ಬಂಟ್ವಾಳದ ಶಂಭೂರು ಸಮೀಪ ನದಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಸಮೀಪದ ಪಿಲಿಗೂಡು ನಿವಾಸಿ ರಮೇಶ್ ಗೌಡ (45) ಎಂದು ಗುರುತಿಸಲಾಗಿದೆ. ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದ ರಮೇಶ್ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಭಾನುವಾರದಂದು ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ಸಮೀಪ ಮೃತದೇಹಚು ದೊರೆತಿದ್ದು, ವಿಷಯ ತಿಳಿದ ಬಂಟ್ವಾಳ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Also Read  ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಸಾಗಾಟ ➤ ಆರೋಪಿಗಳು ಪರಾರಿ, ಗೋವು ಸಹಿತ ವಾಹನ ವಶಕ್ಕೆ

error: Content is protected !!
Scroll to Top