ಬೆಳ್ತಂಗಡಿ: ಖಾಸಗಿ ಬಸ್ಸಿನ ಚಾಲಕ – ನಿರ್ವಾಹಕರ ಅಜಾಗರೂಕತೆಯ ಪರಿಣಾಮ ► ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.18. ಖಾಸಗಿ ಬಸ್ಸಿನ ಚಕ್ರದಡಿಗೆ ಸಿಲುಕಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕರಂಬಾರಿನ ದರ್ಬೆಪಲ್ಕೆ ಭಜನಾ ಮಂದಿರದ ಬಳಿ ಸೋಮವಾರ ಸಂಜೆ‌ ನಡೆದಿದೆ.

ಮೃತ ಬಾಲಕನನ್ನು ಕರಂಬಾರು ಸಮೀಪದ ದರ್ಬೆಪಲ್ಕೆ ನಿವಾಸಿ ಉಮೇಶ್ ಸಫಲ್ಯ ಎಂಬವರ ಪುತ್ರ ಚಿಂತನ್ (8) ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿಯೊಂದಿಗೆ ಮದುವೆಗೆಂದು ತೆರಳಿದ್ದು, ಗೋಪಾಲಕೃಷ್ಣ ಎಂಬ ಖಾಸಗಿ ಬಸ್ಸಿನಲ್ಲಿ ಹಿಂತಿರುಗಿ ಇಳಿಯುತ್ತಿದ್ದ ವೇಳೆ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನಿಂದ ಕೆಳಗೆ ಬಿದ್ದ ಬಾಲಕ ಬಸ್ಸಿನ ಚಕ್ರಕ್ಕೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಚಾಲಕ ಹಾಗೂ ನಿರ್ವಾಹಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಭೇಟಿ ನೀಡಿ ಪರಿಶೀಲಿಸಿದ್ದು, ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ - ಪೊಲೀಸ್ ರ ನಿಯೋಜನೆ

error: Content is protected !!
Scroll to Top