ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೋಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಜೂನ್ 20 ರಂದು ಪೂರ್ವಾಹ್ನ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಮಂಗಳಾದೇವಿ, ಬಜಾಲ್, ಮೇರಿಹಿಲ್, ಪಚ್ಚನಾಡಿ, ಜಪ್ಪಿನಮೊಗರು, ವಾಮಂಜೂರು ನೀರುಮಾರ್ಗ, ಶಕ್ತಿನಗರ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಲು ಆಯುಕ್ತರು, ಮಹಾನಗರಪಾಲಿಕೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಹಾರಿಕಾ ಮಂಜುನಾಥ್ ರಿಂದ ಅಝಾನ್ ಬಗ್ಗೆ ಸುಳ್ಳಾರೋಪ..! ➤ ಪಿಎಫ್ ಐ ಬೆಳ್ತಂಗಡಿ ವತಿಯಿಂದ ದೂರು ದಾಖಲು

error: Content is protected !!
Scroll to Top