ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20 ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ.

ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/ hಚಿ (ರೂ.432/ಎಕ್ರೆ) ಗಳನ್ನು ಸಮೀಪದ ಬ್ಯಾಂಕ್‍ನಲ್ಲಿ ತುಂಬಿ ನೊಂದಾಯಿಸಿಕೊಳ್ಳಬಹುದು. 2018ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ಆಗೋಸ್ಟ್ 14 ಕ್ಕೆ ನಿಗದಿಪಡಿಸಲಾಗಿದೆ. ಈ ಯೋಜನೆಯು ಬೆಳೆಸಾಲ ಪಡೆದ ರೈತರಿಗೆ ಕಡ್ಡಾಯವಾಗಿದ್ದು, ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ/ಖಾತೆ/ಪಾಸ್‍ಪುಸ್ತಕ/ಕಂದಾಯ ರಶೀದಿ ಯಾವುದಾದರೂ ಒಂದನ್ನು ನೀಡಿ ನೊಂದಣಿ ಮಾಡಿಸಬಹುದು ಹಾಗೂ ಬೆಳೆ ಬಿತ್ತಿದ/ನಾಟಿ ಮಾಡಿದ 30 ದಿನಗಳೊಳಗೆ ಅಥವಾ ನಿಗದಿಪಡಿಸಿರುವ ದಿನಾಂಕದೊಳಗೆ ಯಾವುದು ಮುಂಚೆಯೋ ಆ ಅವಧಿಯೊಳಗೆ ಬ್ಯಾಂಕಿಗೆ ತಮ್ಮ ಘೋಷಣೆಗಳನ್ನು ಸಲ್ಲಿಸಬಹುದಾಗಿದೆ.

 

Also Read  ಆತೂರು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಉಪ್ಪಿನಂಗಡಿ ವಲಯದ ಫ್ರೀಡಂ ಸ್ಕ್ವಾರ್ ವತಿಯಿಂದ ➤73ನೇ ಸ್ವಾತಂತ್ರ್ಯೋತ್ಸವ ಆಚರಣೆ

 

 

 

error: Content is protected !!
Scroll to Top