ಕಬಕ: ಕಾರು ಬೈಕ್ ಗಳಿಗೆ ಸರಣಿ ಢಿಕ್ಕಿ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.20. ಕಾರೊಂದು ಮೂರು ಬೈಕ್‌ಗಳಿಗೆ ಸರಣಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕಬಕ ಸಮೀಪ ಬುಧವಾರದಂದು ನಡೆದಿದೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಕಬಕ ಸಮೀಪದ ಪೋಳ್ಯ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಲ್ಲಡ್ಕ ನಿವಾಸಿ ಶ್ರೀಧರ ಗೌಡ (44), ವಿಟ್ಲ ಜೋಗಿಬೆಟ್ಟು ನಿವಾಸಿ ಸಚಿನ್(23), ವಿಟ್ಲ ಸಮೀಪದ ಕೇಪು ನಿವಾಸಿ ಶಿವರಾಮ ಶೆಟ್ಟಿ(45) ಮತ್ತು ವಿಟ್ಲ ಉಕ್ಕುಡ ನಿವಾಸಿ ಪವನ್ (25) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು

error: Content is protected !!
Scroll to Top