ಬಂಟ್ವಾಳ: ಎಟಿಎಂ ದರೋಡೆಗೆ ವಿಫಲ ಯತ್ನ ► ಏನೂ ಸಿಗದಿದ್ದಾಗ ದರೋಡೆಕೋರ ಮಾಡಿದ‌್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ಸಿಂಡಿಕೇಟ್ ಬ್ಯಾಂಕ್ ಗೆ ಸೇರಿದ ಎಟಿಎಂ ಮೆಷಿನೊಂದರ ದರೋಡೆಗೆ ವಿಫಲ‌ ಯತ್ನವು ಗುರುವಾರ ಬೆಳಗಿನ ಜಾವ ಪಾಣೆ ಮಂಗಳೂರಿನಲ್ಲಿ ನಡೆದಿದೆ.

ಗುರುವಾರ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಸಿಂಡಿಕೇಟ್ ಬ್ಯಾಂಕಿನ ಎಟಿಎಂನಲ್ಲಿ ಸೈರನ್ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಎಟಿಎಂ ಯಂತ್ರದ ಕೆಳಗಿನ ಬಾಗಿಲು ತೆರೆದಿದ್ದು ಮಾನಿಟರ್ ಹಾಗೂ ಇತರ ಭಾಗಗಳು ಜಖಂಗೊಂಡಿರುವುದು ಕಂಡುಬಂದಿದೆ. ಜೊತೆಗೆ ಸಿಸಿ ಕ್ಯಾಮರಾ ಹಾಗೂ ಸೈರನ್‌ ಅನ್ನೂ ಹಾನಿಗೈಯಲಾಗಿದ್ದು, ಸಿಸಿ ಕ್ಯಾಮರಾದ ದೃಶ್ಯವಳಿಯನ್ನು ಪರಿಶೀಲಿಸಿದಾಗ ಹಣ ಕಳವಿಗೆ ವಿಫಲ ಯತ್ನ ನಡೆಸಿರುವುದು ತಿಳಿದುಬಂದಿದೆ.

Also Read  ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ 'ಆನಂದ ತೀರ್ಥ ಸ್ವಾಮಿ' ಮೃತದೇಹ ಪತ್ತೆ

ಈ ಬಗ್ಗೆ ಸಿಂಡಿಕೇಟ್ ಬ್ಯಾಂಕ್ ಪಾಣೆಮಂಗಳೂರು ಶಾಖಾ ಪ್ರಬಂಧಕರು‌ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top