ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) nweskadaba.com,ಬಂಟ್ವಾಳ.ಜೂ.28. ವ್ಯಕ್ತಿಯೋರ್ವ ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕೊಟ್ಟಿಂಜ ಎಂಬಲ್ಲಿ ಬುಧವಾರ ದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ, ಕೊಡ್ಮಾಣ್ ಗ್ರಾಮದ ಕೊಟ್ಟಿಂಜ ಮನೆಯ ನಿವಾಸಿ ರೋಹಿತಾಶ್ವ(31) ಎಂದು ಗುರುತಿಸಲಾಗಿದೆ.

ಯಾವುದೋ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದರಿಂದಾಗಿ ತನ್ನ ಚಿಕ್ಕಪ್ಪನ ಮನೆಯ ಎದುರು ಹಲಸಿನ ಮರದ ಕೊಂಬೆಗೆ ನೈಲಾನ್ ಹಗ್ಗವನ್ನು ಕಟ್ಟಿ ಅದರ ಇನ್ನುಂದು ತುದಿಯನ್ನು ಕುಣಿಕೆಯನ್ನಾಗಿ ಮಾಡಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಬುಧವಾರ ದಂದು ಆತ್ಮಹತ್ಯೆ ಮಾಡಿಕೊಂಡ್ದಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.

Also Read  ಕಸ ಹಾಕೋ ಕಿರಾತಕರಿಗೆ ಸ್ಪೆಷಲ್ ಬ್ಯಾನರ್ ರೆಡಿ ➤ ಬ್ಯಾನರ್ ನಲ್ಲಿ ಏನಿದೆ ಗೊತ್ತೇ.?!

 

 

 

 

error: Content is protected !!
Scroll to Top