ಮಂಗಳೂರು: ಸರಕಾರಿ ವಾಹನ ಚಾಲಕರ ಸಂಘದ ಸಭೆ

(ನ್ಯೂಸ್ ಕಡಬ) newskabada.com ಮ0ಗಳೂರು,ಜುಲೈ.04. ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ(ರಿ) ಮಂಗಳೂರು ಇದರ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಸಂಘದ ಕಚೇರಿಯಲ್ಲಿ ಜೂನ್ 24 ರಂದು ಸಂಘದ ಅಧ್ಯಕ್ಷ ದಯಾನಂದ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಇತ್ತೀಚೆಗೆ ನಿವೃತ್ತಿ ಹೊಂದಿರುವ ಲೋಕೋಪಯೋಗಿ ಇಲಾಖೆಯ ಬಾಲಕೃಷ್ಣ ರೈ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಾಜ್ಯ ಸರಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಹಾಗೂ ವಿನ್ಸೆಂಟ್ ಪುರ್ಟಾಡೊ ಎಲ್ಲಾ ಚಾಲಕರನ್ನು ಒಗ್ಗೂಡಿಸುವ ಬಗ್ಗೆ ಸಲಹೆ ನೀಡಿದರು.

 

Scroll to Top