ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಯೋಜನಾ ಪ್ರದೇಶದ ಹೊರ ಭಾಗದಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿನ ಒಂದು ಎಕ್ರೆಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಅರ್ಹ ನೊಂದಾಯಿತ ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಖಾಸಗಿ ವಾಸ್ತು ಶಿಲ್ಪಿಗಳು ತಮ್ಮ ದೃಢೀಕೃತ ದಾಖಲೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಅಭಿವೃಧ್ಧಿ ಶಾಖೆಗೆ ಜುಲೈ 15 ರೊಳಗೆ ಸಲ್ಲಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

 

error: Content is protected !!
Scroll to Top