ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ್ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/ಪ್ರತೀ ಹೆಕ್ಟೇರ್ಗೆ (ರೂ.432/ಎಕ್ರೆ) ಗಳನ್ನು ಸಮೀಪದ ಬ್ಯಾಂಕ್ನಲ್ಲಿ ತುಂಬಿ ನೊಂದಾಯಿಸಿಕೊಳ್ಳಬಹುದು.

2018ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ಆಗಸ್ಟ್ 14 ರಂದು ನಿಗದಿಪಡಿಸಲಾಗಿದೆ. ಈ ಯೋಜನೆಯು ಬೆಳೆಸಾಲ ಪಡೆದ ರೈತರಿಗೆ ಕಡ್ಡಾಯವಾಗಿದ್ದು, ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ/ಖಾತೆ/ಪಾಸ್ಪುಸ್ತಕ/ಕಂದಾಯ ರಶೀದಿ ಯಾವುದಾದರೂ ಒಂದನ್ನು ನೀಡಿ ನೊಂದಣಿ ಮಾಡಿಸಬಹುದು ಹಾಗೂ ಬೆಳೆ ಬಿತ್ತಿದ/ನಾಟಿ ಮಾಡಿದ 30 ದಿನಗಳೊಳಗೆ ಅಥವಾ ನಿಗದಿಪಡಿಸಿರುವ ದಿನಾಂಕದೊಳಗೆ ಯಾವುದು ಮುಂಚೆಯೋ ಆ ಅವಧಿಯೊಳಗೆ ಬ್ಯಾಂಕಿಗೆ ತಮ್ಮ ಘೋಷಣೆಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ಗ್ರಾಮೀಣ ಸಹಕಾರಿ ಬ್ಯಾಂಕ್ (ಸಾಲ ಸಂಸ್ಥೆ)ಗಳನ್ನು ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು/ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

 

Also Read  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 

 

error: Content is protected !!
Scroll to Top