ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿದ್ದು, ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ‌.

ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್ ಕಡಬದ ಯಶೋದಾ ಸೂಪರ್ ಮಾರ್ಕೆಟ್ ಗೆ ತೆರಳಿ ಸಾಮಾಗ್ರಿ ಖರೀದಿಸಿ ತನ್ನ ಜೀಪಿನ ಹತ್ತಿರ ಆಗಮಿಸಿದ ಸಂದರ್ಭದಲ್ಲಿ ಏಕಾಏಕಿ ಮುಗಿಬಿದ್ದ ತಂಡ ಹಲ್ಲೆ ನಡೆಸಿದೆ. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆಯೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಕಡಬ ಠಾಣೆಯ ಮುಂಭಾಗದಲ್ಲಿ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಪೊಲೀಸರ ವಶದಲ್ಲಿರುವ ಆರೋಪಿಗಳನ್ನು ಕುಟ್ರುಪ್ಪಾಡಿ ಪರಿಸರದ ಪ್ರಕಾಶ, ಟಿನ್ಸನ್, ಸನೂಷ್, ಲಿಜೋ, ಸಂತೋಷ್ ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದಾರೆ.

error: Content is protected !!
Scroll to Top