ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಠಾಣಾ ವ್ಯಾಪ್ತಿಯ ಮಣ್ಣಗುಂಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಮರ್ಧಾಳದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗಾಯಾಳು ಯುವಕನನ್ನು ಮರ್ಧಾಳ ಸಮೀಪದ ಬೆತ್ತೋಡಿ ನಿವಾಸಿ ಮಧುಸೂದನ ಎಂಬವರ ಪುತ್ರ ನಿಶಾಂತ್(28) ಎಂದು ಗುರುತಿಸಲಾಗಿದೆ. ನಿಶಾಂತ್ ಮೂಡಬಿದಿರೆಯಿಂದ ನೆಲ್ಯಾಡಿ ಮೂಲಕ ಮರ್ಧಾಳಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಾಯಗಳಾಗಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನೆಲ್ಯಾಡಿ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ನೂಜಿಬಾಳ್ತಿಲದಲ್ಲಿ ಪಿಂಗಾರ ಕಲಾ ಸಂಘದ ಕಲಾವಿಧರಿಂದ ಬೀದಿ ನಾಟಕ

error: Content is protected !!
Scroll to Top