ನೈತಿಕ ಪೊಲೀಸ್ ಗಿರಿ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ಪರಿಚಯದ ಮಹಿಳೆಯ ಜೊತೆಗೆ ಮಾತನಾಡಿದ ಕಾರಣಕ್ಕಾಗಿ ತಂಡವೊಂದು ನಡೆಸಿದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಅಮ್ಮೆಮ್ಮಾರ್ ನಿವಾಸಿ ಮಹಮ್ಮದ್ ಅಶ್ರಫ್(20) ಹಾಗೂ ಫರಂಗಿಪೇಟೆ ನಿವಾಸಿ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಉಡುಪಿಯ ಕೋಟ ನಿವಾಸಿ ಸುರೇಶ್ ಎಂಬವರು ತನ್ನ ಕಾರಿನಲ್ಲಿ ಕೆಲಸದ ನಿಮಿತ್ತ ಬಂಟ್ವಾಳದಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಪರಿಚಯದ ಮಹಿಳೆಯೊಬ್ಬರನ್ನು ನೋಡಿ ಕಾರು ನಿಲ್ಲಿಸಿ ಮಾತನಾಡಿ ಅಲ್ಲಿಂದ ಹೊರಡುವಾಗ ಸುಮಾರು 8 ರಿಂದ 10 ಜನ ಯುವಕರ ತಂಡವು ಕಾರನ್ನು ಅಡ್ಡಗಟ್ಟಿ ಸುರೇಶ್ ರವರಿಗೆ ಅವಾಚ್ಯ ಶಬ್ದಗಳಿಂದ ಬಯ್ದು, ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಯುವಕನು ಅನ್ಯಕೋಮಿನ ಯುವತಿಯನ್ನು ಕಾರಿನಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋಗಲು ಯತ್ನಿಸುತ್ತಿದ್ದಾನೆ ಎಂದು ಗಾಳಿ ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

error: Content is protected !!
Scroll to Top