ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,‌ ಆ.02. 2018-19ನೇ ಸಾಲಿನಲ್ಲಿ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಯಂತ್ರಚಾಲಿತ ದ್ವಿಚಕ್ರವಾಹನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ಬುದ್ದಿಮಾಂದ್ಯ ವ್ಯಕ್ತಿಗಳ ತಂದೆ-ತಾಯಿ/ಪೋಷಕರ ವಿಮಾ ಯೋಜನೆ, ನಿರಾಮಯ, ನಿರುದ್ಯೋಗ ಭತ್ಯೆ, ಸ್ಪಾರ್ಧಾ ಚೇತನ,  ಆಧಾರ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ತಾಲ್ಲೂಕಿನ  ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತರ ಕಲ್ಯಾಣಾಧಿಕಾರಿಯವರ ಕಚೇರಿ, ದೂರವಾಣಿ ಸಂಖ್ಯೆ: 0824-2458173/2455999 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group