ಸುಳ್ಯ: ಮೇಲಿನಿಂದ ಕೆಳಕ್ಕೆ ಜಾರಿದ ಗುಡ್ಡ, ಬೃಹತ್ ಕಲ್ಲುಗಳೊಂದಿಗೆ ಹೊರಬರುತ್ತಿರುವ ನೀರು ► ಓರ್ವ ಮೃತ್ಯು – ಐವರು ನಾಪತ್ತೆ, ಮುಂದುವರಿದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.17. ಗುಡ್ಡವೊಂದು ಮೇಲಿನಿಂದ ಕೆಳಕ್ಕೆ ಜಾರುತ್ತಿರುವ ಪರಿಣಾಮ ಓರ್ವ ಮೃತಪಟ್ಟು ಐವರು ನಾಪತ್ತೆಯಾಗಿರುವ ಘಟನೆ ಸಂಪಾಜೆ -ಮಡಿಕೇರಿ ಮಧ್ಯದ ಜೋಡುಪಾಲ ಎಂಬಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಜೋಡುಪಾಲ ನಿವಾಸಿ ಬಸಪ್ಪ ಎಂದು ಗುರುತಿಸಲಾಗಿದೆ. ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಹಮೀದ್ ಎಂಬವರ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ನೂರಕ್ಕೂ ಅಧಿಕ ಮಂದಿ ಇಕ್ಕಟ್ಟಿನಲ್ಲಿ ಸಿಲುಕಿಕೊಂಡಿದ್ದು, ಸುಮಾರು ಅರುವತ್ತರಷ್ಟು ಮಂದಿಯನ್ನು ಹಗ್ಗದ ಸಹಾಯದಿಂದ ಕರೆತಂದು ಕಲ್ಲುಗುಂಡಿ ಶಾಲೆ ಮತ್ತು ಅರಂತೋಡು ತೆಕ್ಕಿಲ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಬೃಹತ್ ಕಲ್ಲುಗಳ ಸಹಿತ ನೀರು ಗುಡ್ಡದಿಂದ ಇಳಿದು ಬರುತ್ತಿರುವುದರಿಂದ ಸುಮಾರು ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

Also Read  ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

error: Content is protected !!
Scroll to Top