ಗುಂಡ್ಯ ಸಮೀಪ ಗುಡ್ಡ ಜರಿತ ► ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.19. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಗುಡ್ಡ ಜರಿದು ರಸ್ತೆಗೆ ಬಿದ್ದಿದ್ದರಿಂದಾಗಿ ರಸ್ತೆ ತಡೆಯುಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಗುಡ್ಡ ಜರಿದಿದೆ. ಇದರಿಂದಾಗಿ ಮಂಗಳೂರು ಹಾಗೂ ಬೆಂಗಳೂರು ಕಡೆಗೆ ತೆರಳುವ ಪ್ರಯಾಣಿಕರು ಪರದಾಡಿದರು.

error: Content is protected !!
Scroll to Top