ಇಂದು ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮಿ ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇಂದು (ಸೆಪ್ಟೆಂಬರ್ 16) ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿರುವ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಪೂರ್ವಾಹ್ನ ಗಂಟೆ 10.00ಕ್ಕೆ ಪಂಜ ಕ್ರಾಸ್ ಬಳಿಯಿಂದ ಪೂರ್ಣಕುಂಭ ಸ್ವಾಗತದ ಮೂಲಕ ಆಕರ್ಷಕ ರಥದಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ಒಕ್ಕಲಿಗ ಸಭಾಭವನಕ್ಕೆ ಕರೆತರಲಿದ್ದಾರೆ. 10.30 ಕ್ಕೆ ಸಭಾ ಕಾರ್ಯಕ್ರಮವು ಆರಂಭಗೊಳ್ಳಲಿದ್ದು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಅವರನ್ನು ಸಮ್ಮಾನಿಸಿ ಗೌರವ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ, ಹಾವೇರಿ ಅಬಕಾರಿ ಇಲಾಖಾ ಉಪ ಆಯುಕ್ತ ಗೋಪಾಲಕೃಷ್ಣ ಗೌಡ ಪುಯಿಲ ಅವರು ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಛಾಯಗ್ರಾಹಕ ಪ್ರಶಸ್ತಿ ಪುರಸ್ಕೃತ ಶಿವರಾಮ ಗೌಡ ಎಂ.ಎಸ್., ಅಂತರಾಷ್ಟ್ರೀಯ ಕರಾಟೆ ಪಟು ದೀಪಕ್ ಗೌಡ ಪನ್ಯಾಡಿ, ಪ್ರೋ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿರುವ ಮಿಥಿನ್ ಗೌಡ, ವೈದ್ಯಕೀಯ ಪದವೀಧರ ಡಾ|ಅವಿನ್ ಗೌಡ ಡಿ.ಪಿ. ಹಾಗೂ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ ವಿಜೇತ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಗೌಡ ಅಮೈ ಅವರಿಗೆ ಗೌರವ ನಡೆಯಲಿದೆ.

error: Content is protected !!

Join the Group

Join WhatsApp Group