ಕರಾವಳಿಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ ► ಸೆ. 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.20. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮರಳು ಸಮಸ್ಯೆ ಮತ್ತು ಭೂಪರಿವರ್ತನೆ ಸಂಬಂಧ ಸಭೆಯನ್ನು ಕರೆಯಲಾಗಿದೆ.

ಈ ಸಭೆಗೆ ಪೂರ್ವಭಾವಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ರಾಜಶೇಖರ್ ಪಾಟೀಲ್ ಅವರು 24 ರಂದು ಅಪರಾಹ್ನ ಎರಡು ಗಂಟೆಗೆ ವಿಶೇಷ ಸಭೆಯನ್ನು ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅದೇ ದಿನ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕರಾವಳಿಯ ಮರಳು ಸಮಸ್ಯೆಗೆ ಪರಿಹಾರ ಕಂಡು ಹುಡುಕಲು ಸಭೆಯನ್ನು ನಡೆಸಲು ತಾನು ಮುಖ್ಯಮಂತ್ರಿಗಳನ್ನು ವಿನಂತಿಸಿದ್ದು, ಅದರಂತೆ ಈ ಸಭೆ ಏರ್ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸಭೆಯ ಹಿನ್ನೆಲೆಯಲ್ಲಿ ಸೆ.24 ರಂದು ಮಂಗಳೂರಿನಲ್ಲಿ ನಿಗದಿಯಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಸೆ.26ಕ್ಕೆ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group