ಕೊಯಿಲ: ಸಾಲಬಾಧೆಗೆ ತುತ್ತಾಗಿ ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.10. ಸಾಲಬಾಧೆಯಿಂದ ಬೇಸತ್ತ ರೈತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಬುಧವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಓಕೆ ಕೊಲ್ಯ ನಿವಾಸಿ ದಿ| ಸೋಮಪ್ಪ ಗೌಡ ಎಂಬವರ ಪುತ್ರ ಕುಶಾಲಪ್ಪ ಗೌಡ (53) ಎಂದು ಗುರುತಿಸಲಾಗಿದೆ. ಬ್ಯಾಂಕ್ ಹಾಗೂ ಕೈ ಸಾಲಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಇವರು ಈ ಬಗ್ಗೆ ಮನನೊಂದು ಬುಧವಾರದಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಪಕ್ಕದ ಕೊಠಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದು ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಈ ಮಂತ್ರ ಹೇಳುವುದರಿಂದ ನಿಮಗೆ ಮಂಗಳ ದೋಷ ಒಂದೇ ದಿನದಲ್ಲಿ ನಿವಾರಣೆ ಆಗುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

error: Content is protected !!
Scroll to Top