ಸಕಲೇಶಪುರ: ರಸ್ತೆ ಅಪಘಾತದಲ್ಲಿ ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.01. ಸಕಲೇಶಪುರದಲ್ಲಿ ಬೈಕ್ ಅಪಘಾತ ಸಂಭವಿಸಿದ ಕಾರಣ ಪುತ್ತೂರಿನ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಗುರುವಾರದಂದು ನಡೆದಿದೆ.

ಮೃತನನ್ನು ಪುತ್ತೂರು ವಿವೇಕಾನಂದ ಕಾಲೇಜಿನ ಕಾನೂನು ವಿದ್ಯಾರ್ಥಿ, ಕೊಯಿಲ ನಿವಾಸಿ ಪೂರಿಂಗ ಉದಯ ಭಟ್ ಎಂಬವರ ಪುತ್ರ ಉಜ್ವಲ್ ಎಂದು ಗುರುತಿಸಲಾಗಿದೆ. ಉಜ್ವಲ್ ಪ್ರಯಾಣಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಸಕಲೇಶಪುರದ ಕುಂಬಾರಕಟ್ಟೆ ಎಂಬಲ್ಲಿ ಅಪಘಾತವಾಗಿ ಈ ದುರ್ಘಟನೆ ಸಂಭವಿಸಿದೆ.

error: Content is protected !!
Scroll to Top