ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ಮಾಜಿ ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರನನ್ನು ತಂಡವೊಂದು ಕೊಚ್ಚಿ ಕೊಲೆಗೈದ ಘಟನೆ ವಾಮಂಜೂರಿನಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ.

ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಗೊಂಡಿದ್ದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ (22) ಎಂಬಾತನನ್ನು ವಾಮಂಜೂರು ಕುಕ್ಕಿಪಲ್ಕೆ ಎಂಬಲ್ಲಿ ನಾಲ್ವರು ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!

Join the Group

Join WhatsApp Group