ನೆಲ್ಯಾಡಿ: ಅಕ್ರಮ ಮರಳು ಸಾಗಾಟ ► ಹಲವು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.13. ಪುತ್ತೂರು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಅಕ್ರಮ ಮರಳು ಸಾಗಾಟದ ಪಿಕಪ್ ವಾಹನಗಳನ್ನು ವಶಪಡಿಸಿಕೊಂಡ ಘಟನೆ ನೆಲ್ಯಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉದನೆಯಿಂದ ಗುಂಡ್ಯದವರೆಗೆ ಅಲ್ಲಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ಗಳನ್ನು ವಶಕ್ಕೆ ಪಡೆದುಕೊಂಡು ನೆಲ್ಯಾಡಿ ಹೊರಠಾಣೆಯಲ್ಲಿ ಇರಿಸಿದ್ದಾರೆ.

error: Content is protected !!

Join the Group

Join WhatsApp Group