ರೌಡಿಶೀಟರ್ ಪವನ್ ರಾಜ್ ಕೊಲೆ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26. ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ಮಂಗಳವಾರದಂದು ನಡೆದಿದ್ದ ಕೊಲೆ ಪ್ರಕರಣವನ್ನು ಕೃತ್ಯ ನಡೆದ 24 ಗಂಟೆಗಳೊಳಗಾಗಿ ಪೊಲೀಸರು ಬೇಧಿಸಿದ್ದಾರೆ.

ಮಂಗಳವಾರದಂದು ರೌಡಿಶೀಟರ್ ಪವನ್ ರಾಜ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಗ್ರಾಮಾಂತರ ಪೋಲೀಸರು ಇದೀಗ ಹತ್ಯೆಗೆ ಸಂಬಂಧಿಸಿದಂತೆ ವಾಮಂಜೂರಿನ ಬಿಪಿನ್, ಶರಣ್ ಹಾಗೂ ಹರೀಶ್ ರವರನ್ನು ಬಂಧಿಸಿದ್ದಾರೆ. ಪವನ್ ರಾಜ್ ಕೊಲೆ ಮಾಡಿದ ಬಳಿಕ ಆರೋಪಿಗಳು ಹತ್ಯೆಗೆ ನಡೆಸಿದ ಲಾಂಗ್ ಮಚ್ಚುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಕೊಲೆಯಾದ ಪವನ್ ರಾಜ್ ಶೆಟ್ಟಿ, ರೌಡಿ ಶೀಟರ್ ಆಗಿದ್ದು, ಈತನ ಮೇಲೆ ಹಲವು ಕೊಲೆಯತ್ನ ಪ್ರಕರಣಗಳು ದಾಖಲಾಗಿತ್ತು. ಪವನ್ ರಾಜ್ ಶೆಟ್ಟಿ ಈ ಹಿಂದೆ ಕೊಲೆಯಾಗಿದ್ದ ವಾಮಂಜೂರು ರೋಹಿ ಮಗನಾಗಿದ್ದು, ತನ್ನ ತಂದೆಯ ಕೊಲೆ ನಡೆಸಿದವರನ್ನು ಮುಗಿಸುವುದಾಗಿ ಹೇಳಿಕೊಂಡಿದ್ದನು. ಪೋಲೀಸರು ವಶಪಡಿಸಿಕೊಂಡ ಆರೋಪಿಗಳೆಲ್ಲರೂ ವಾಮಂಜೂರಿನ ಸ್ಥಳಿಯರೇ ಆಗಿದ್ದು, ಕೊಲೆಗೆ ನಿಖರ ಕಾರಣ ಏನು ಎನ್ನುವುದು ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

error: Content is protected !!

Join the Group

Join WhatsApp Group