ಪಂಜ: ಅಕ್ರಮ ಮರ ಸಾಗಾಟ ಭೇದಿಸಿದ ಅರಣ್ಯಾಧಿಕಾರಿಗಳು ► ಟಿಪ್ಪರ್, ಬೊಲೇರೋ ಅರಣ್ಯಾಧಿಕಾರಿಗಳ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಪಂಜ ವಲಯ ಅರಣ್ಯಾಧಿಕಾರಿಗಳು ಟಿಪ್ಪರ್ ಹಾಗೂ ಬೊಲೋರೋ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರದಂದು ನಡೆದಿದೆ.

ಪಂಜ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಬಳ್ಪ ಗ್ರಾಮದ ಅಡ್ಡಬೈಲು ಎಂಬಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಕಿರಲ್‌ ಬೋಗಿ ಮತ್ತು ಹೆಬ್ಬಲಸು ಜಾತಿಗೆ ಸೇರಿದ ಮರದ 13 ದಿಮ್ಮಿಗಳನ್ನು ಅಕ್ರವಾಗಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಬೆಂಗಾವಲಾಗಿ ತೆರಳುತ್ತಿದ್ದ ಮಹೀಂದ್ರ ಬೊಲೋರೋ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸುಮಾರು 09 ಲಕ್ಷ ಎಂದು ಅಂದಾಜಿಸಲಾಗಿದೆ.

ಪಂಜ ವಲಯಾರಣ್ಯಾಧಿಕಾರಿ ಗಿರೀಶ್ ಆರ್ ರವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಅರಣ್ಯ ರಕ್ಷಕರಾದ ಸಂತೋಷ್ ಧಮ್ಮಸೂರ, ಮನೋಹರ್, ಅರಣ್ಯ ವೀಕ್ಷಕರಾದ ಗಣೇಶ್ ಹೆಗ್ಡೆ, ಮಹೇಶ್ ಕೊಳ್ಳಿ, ವಾಹನ ಚಾಲಕ ಪದ್ಮಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!

Join the Group

Join WhatsApp Group