ಬೈಕ್ – ಲಾರಿ ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಬೈಕ್ ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಗರದ ನಂತೂರ್ ಜಂಕ್ಷನ್‍ನಲ್ಲಿ ಗುರುವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಮಂಗಳೂರಿನಲ್ಲಿ ಸಹಕಾರ ಇಲಾಖೆಯಲ್ಲಿ ಆಡಿಟರ್ ಆಗಿ ಕೆಲಸ ನಿರ್ವಹಿಸುತ್ತಿರುವ  ಮಹೇಶ್ವರಪ್ಪ ಎಂಬವರ ಏಕೈಕ ಪುತ್ರಿ ನಗರದ ಪ.ಪೂ.ಕಾಲೇಜೊಂದರ ದ್ವಿತೀಯ ವರ್ಷದ ವಿದ್ಯಾರ್ಥಿನಿ ಬಿಂದು (18) ಎಂದು ಗುರುತಿಸಲಾಗಿದೆ. ಈ ಕೆ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಂಟೈನರ್ ಲಾರಿ ಢಿಕ್ಕಿ ಹೊಡೆದಿದ್ದು, ಬಿಂದು ತೀವ್ರ ತರದ ಗಾಯಗಳೊಂದಿಗೆ ಮೃತಪಟ್ಟರೆ ಮಹೇಶ್ವರಪ್ಪ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!

Join the Group

Join WhatsApp Group